• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home ದೈವ ದೇವೆರ್

ಅಯ್ಯಪ್ಪಸ್ವಾಮಿ ದೇವಸ್ಥಾನ.

Tulunada Dhwani by Tulunada Dhwani
May 29, 2025
in ದೈವ ದೇವೆರ್
0
ಅಯ್ಯಪ್ಪಸ್ವಾಮಿ ದೇವಸ್ಥಾನ.
0
SHARES
7
VIEWS
Share on FacebookShare on TwitterShare on WhatsApp

18ಶಿರ್ವ-1. ಕಟಪಾಡಿ ಏಣಗುಡ್ಡೆ ಕುರ್ಕಾಲು ರಿಶಾಲ್ ನಗರದಲ್ಲಿ ಅಮೃತ ಶಿಲಾಮಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಸ್ಥಾಪನೆ,ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಶಿರ್ವಃ ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರನಾಡೆಂದು ಹೇಳಬಹುದು. ಪಾಜಕ ಕ್ಷೇತ್ರ, ದುರ್ಗಾದೇವಿ ಸನ್ನಿಧಾನ, ಪರಶುರಾಮ ಸನ್ನಿಧಾನವನ್ನು ಸುತ್ತುವರಿಯುವ ಮೂಲಕ ಕಟಪಾಡಿ ಏಣಗುಡ್ಡೆಯ ಪಂಪಾ ಕ್ಷೇತ್ರದ ಅಯ್ಯಪ್ಪ ಸ್ವಾಮಿ ಮಂದಿರ ‌ ಪಾವಿತ್ರ್ಯ ತರುವ ಸಾನ್ನಿಧ್ಯವಾಗಲಿದೆ. ಹಿಂದೂ ಧರ್ಮದ ಉಳಿವಿನೊಂದಿಗೆ ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವಲ್ಲಿ ಅಯ್ಯಪ್ಪ ಸ್ವಾಮಿ ವೃತವು ಕಾರಣವಾಗಿದೆ ಎಂದು ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಏಣಗುಡ್ಡೆ ಕುರ್ಕಾಲು ರಸ್ತೆಯ ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಸ್ಥಾಪನೆ,ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನೆರವೇರಿಸಿ ಬಳಿಕ‌ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಭಾನುವಾರ ಆಶೀರ್ವಚನ ನೀಡಿದರು.
ಕಟಪಾಡಿಯ ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ 40 ವರ್ಷಗಳ ನಂತರ ಸುಮಾರು 5 ಕೋಟಿ ವೆಚ್ಚದ ನೂತನ ದೇವಳ ನಿರ್ಮಿಸಲು ಸಂಕಲ್ಪಿಸಿದ್ದಾರೆ. ಅವರ ದೇವಳ ನಿರ್ಮಾಣದ ಕನಸು ನನಸಾಗಲಿ ಎಂದರು. ಕಾಪು‌ ಶಾಸಕರಾದ ಗುರ್ಮೆ ಸುರೇಶ್ ‌ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಶಾಸಕರಾದ ಯಶ್ ಪಾಲ್ ಎ. ಸುವರ್ಣ, ಕುದ್ರೋಳಿ‌ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸಲು 30 ಸೆಂಟ್ಸ್ ನಿವೇಶನವನ್ನು ದಾನವಾಗಿ ನೀಡಿರುವ ಯುವ ಉದ್ಯಮಿ ರಿಶಾನ್ ಟಿ ಮತ್ತು ಪ್ರಮೀಳಾ ದಂಪತಿಯನ್ನು ಸನ್ಮಾನಿಸಲಾಯಿತು.
ಈ‌ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ಚಂದ್ರಹಾಸ ಗುರುಸ್ವಾಮಿ ಮುಂಬೈ, ಪ್ರಮುಖರಾದ ರಾಘು ಪೂಜಾರಿ ಕಲ್ಮಂಜೆ, ದಯಾನಂದ ವಿ ಬಂಗೇರ, ಪಳ್ಳಿ ಲಕ್ಮೀನಾರಾಯಣ ಹೆಗ್ಡೆ, ಶಶಿಧರ ವಾಗ್ಳೆ, ಶಶಿಧರ ಶೆಟ್ಟಿ ಮುಂಬೈ, ಯೋಧ ಸಚಿನ್ ಕರ್ಕೇರ ಪೆರ್ಡೂರು, ರಾಧಾಕೃಷ್ಣ ಮೆಂಡನ್, ನವೀನ್ ಅಮೀನ್ ಶಂಕರಪುರ, ಶಿವಪ್ರಸಾದ್ ಕಟಪಾಡಿ, ಸಂತೋಷ್ ಸುವರ್ಣ ಬೊಳ್ಜೆ, ರಾಜೇಶ್ ಮಸ್ಕತ್, ಭುವನ್ ಪಡುಕರೆ, ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಗುರುಸ್ವಾಮಿ ಸುರೇಶ್ ಜತ್ತನ್ ಕಟಪಾಡಿ, ಅಯ್ಯಪ್ಪ ದೇಗುಲ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ರಿಶಾನ್ ಟಿ ಕಟಪಾಡಿ, ಕಾರ್ಯಾಧ್ಯಕ್ಷ ಕೇಶವ ಕುಂದರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜಿ.ಸನಿಲ್ ಅಚ್ಚಡ ಕಟಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರದ ತಂತ್ರಿಗಳಾದ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಮಂಗಳೂರು ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು.
ಅಭಿಷೇಕ್ ಕರ್ಕೇರ ಪ್ರಾರ್ಥಿಸಿದರು. ಪತ್ರಕರ್ತ ಪ್ರಕಾಶ್ ಸುವರ್ಣ ಕಟಪಾಡಿ ಸ್ವಾಗತಿಸಿ,ವಂದಿಸಿದರು.

Previous Post

“ಪೊರ್ಲೈಸಿರ” ಲೇಸ್.

Next Post

ಪೆಜಮಾಡಿ ಆಲಡೆ

Related Posts

ರುದ್ರ ಯಾಗದ ದೊಂಪ ಮುಹೂರ್ತ
ದೈವ ದೇವೆರ್

ರುದ್ರ ಯಾಗದ ದೊಂಪ ಮುಹೂರ್ತ

May 3, 2026
ರುದ್ರ ಯಾಗದ ದೊಂಪಮುಹೂರ್ತ
ದೈವ ದೇವೆರ್

ರುದ್ರ ಯಾಗದ ದೊಂಪಮುಹೂರ್ತ

May 2, 2026
ಕಸಾಪ ಉಡುಪಿ ಬೀಷ್ಮೋತ್ಸವ
ದೈವ ದೇವೆರ್

ಕಸಾಪ ಉಡುಪಿ ಬೀಷ್ಮೋತ್ಸವ

May 2, 2026
ಹಿರೇಬೆಟ್ಟು ಮಹಾಲಿಂಗೇಶ್ವರ
ದೈವ ದೇವೆರ್

ಹಿರೇಬೆಟ್ಟು ಮಹಾಲಿಂಗೇಶ್ವರ

April 21, 2026
Next Post
ಪೆಜಮಾಡಿ ಆಲಡೆ

ಪೆಜಮಾಡಿ ಆಲಡೆ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಉಚ್ಚಿಲಗ್ ಜಗ್ಗೇಶ್

ಉಚ್ಚಿಲಗ್ ಜಗ್ಗೇಶ್

May 3, 2026
ರುದ್ರ ಯಾಗದ ದೊಂಪ ಮುಹೂರ್ತ

ರುದ್ರ ಯಾಗದ ದೊಂಪ ಮುಹೂರ್ತ

May 3, 2026
ರುದ್ರ ಯಾಗದ ದೊಂಪಮುಹೂರ್ತ

ರುದ್ರ ಯಾಗದ ದೊಂಪಮುಹೂರ್ತ

May 2, 2026
ಮೇ 18: ಉದ್ಯೋಗ ಮೇಳ

ಮೇ 18: ಉದ್ಯೋಗ ಮೇಳ

May 2, 2026
ಕಸಾಪ ಉಡುಪಿ ಬೀಷ್ಮೋತ್ಸವ

ಕಸಾಪ ಉಡುಪಿ ಬೀಷ್ಮೋತ್ಸವ

May 2, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ